ಅದ್ಯಾಯ 2

ದೇವರು ಪಾಪಾತ್ಮರನ್ನು ರಕ್ಷಿಸಿ ಕ್ರಿಸ್ತನ ಜೀವದಲ್ಲಿ ಪಾಲುಗಾರರನ್ನಾಗಿ ಮಾಡಿರುವುದಕ್ಕೆ ಆತನ ಕೃಪೆಯೇ ಕಾರಣ 1 ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದಿರಿ. 2 ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ; ವಾಯುಮಂಡಲದಲ್ಲಿನ ದುಷ್ಟ ಶಕ್ತಿಗಳ ಅಧಿಪತಿಗೆ, ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಕೆಲಸ ನಡೆಸುವ ದುರಾತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. 3 ಪೂರ್ವದಲ್ಲಿ ಅವಿಧೇಯರಾಗಿದ್ದು, ಶರೀರಭಾವದ ಆಸೆಗಳಿಗೆ ಅಧೀನರಾಗಿ ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು. 6 4 ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು ಅಪರಾಧಗಳ ದೆಸೆಯಿಂದ 5 ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೇವೆ. ನಮ್ಮನ್ನು ಬದುಕಿಸಿದ್ದಲ್ಲದೆ ತಾನು ಕ್ರಿಸ್ತ ಯೇಸುವಿನಲ್ಲಿ ನಮಗೆ ಮಾಡುವ ಉಪಕಾರದ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು 7 ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ. 8 ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮ ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. 9 ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ; ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಅವಕಾಶವಿಲ್ಲ. 10 ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ. ಯೆಹೂದ್ಯರಿಗೆ ಉಂಟಾದ ಎಲ್ಲಾ ವಾಗ್ದಾನಗಳಲ್ಲಿ ಅನ್ಯ ಜನಾಂಗಗಳು ಕ್ರಿಸ್ತನ ಮೂಲಕ ಸಹಭಾಗಿಗಗಳಾಗಬಹುದೆಂಬ ಬೋಧನೆ. 11 ಹಿಂದೊಮ್ಮೆ ನೀವು ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ; ಅಂದು ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರು ಎಂದು ಕರೆಯಲ್ಪಟ್ಟವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ. 12 ಪೂರ್ವಕಾಲದಲ್ಲಿ ಕ್ರಿಸ್ತನನ್ನು ಹೊಂದದವರಾಗಿದ್ದು ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ಅಬ್ರಹಾಮನಿಗೆ ಉಂಟಾದ ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ, ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ, ದೇವರನ್ನರಿಯದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. 13 ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಹೊಂದಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ. 14 ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಸಮಾಧಾನದ ಪ್ರಭುವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನೆರವೇರಿಸಿ, ನಮ್ಮ ಮೇಲೆ ಇದ್ದ ದ್ವೇಷವನ್ನು ನಾಶಮಾಡಿ ನಮ್ಮನ್ನು ಅಗಲಿಸಿದ್ದ ಅಡ್ಡ ಗೋಡೆಗಳನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ. 15 ಸಮಾಧಾನವನ್ನುಂಟು ಮಾಡುವವನಾಗಿಯೂ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಜನಾಂಗವನ್ನಾಗಿ ಮಾಡಿದ್ದಾನೆ. 16 ಮೇಲೆ ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ. 17 ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು. 18 ಮೂಲಕ ನಾವೂ ನೀವೂ ಒಂದೇ ಪವಿತ್ರಾತ್ಮನ ಮೂಲಕ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು. 19 ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. 20 ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. 21 ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ಕಟ್ಟಡವು ಕಟ್ಟಲ್ಪಟ್ಟು ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. 22 ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.